ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಛಾಯಾಗ್ರಾಹಕ ಬಿ.ಸಿ. ಗೌರಿಶಂಕರ್(54) ಇನ್ನಿಲ್ಲ. ಬಹು ದಿನಗಳಿಂದ ಪಿತ್ತಕೋಶ ಕಾಯಿಲೆಯಿಂದ ಬಳಲುತ್ತಿದ್ದ ಗೌರಿಶಂಕರ್, ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ(ನ.16) ರಾತ್ರಿ ಮೃತಪಟ್ಟರು.
ನಟಿ ರಕ್ಷಿತಾ ಗೌರಿಶಂಕರ್ ಅವರ ಪುತ್ರಿ. ನಾಡಿನ ಹೆಮ್ಮೆಯ ಛಾಯಾಗ್ರಾಹಕರಲ್ಲಿ ಒಬ್ಬರಾಗಿದ್ದ ಗೌರಿಶಂಕರ್, 90 ಕ್ಕೂ ಹೆಚ್ಚು ಕನ್ನಡ ಚಿತ್ರಗಳಿಗೆ ಛಾಯಾಗ್ರಹಣ ನೀಡಿದ್ದಾರೆ. ಅಲ್ಲದೇ ಒಂದು ಹಿಂದಿ ಚಿತ್ರ ಸೇರಿದಂತೆ ಕನ್ನಡದ ಕೆಂಡದ ಮಳೆ, ಏಳು ಸುತ್ತಿನ ಕೋಟೆ, ಆಟ ಬೊಂಬಾಟ ಚಿತ್ರಗಳನ್ನು ನಿರ್ದೇಶಿಸಿದ್ದರು
ಮಿಂಚಿನ ಓಟ, ಅರಿವು, ಸಿಂಗಾರೆವ್ವ, ಮೈಸೂರು ಮಲ್ಲಿಗೆ, ಓಂ, ಪುಷ್ಪಕ ವಿಮಾನ- ಈ ಚಿತ್ರಗಳ ಛಾಯಾಗ್ರಹಣಕ್ಕೆ ಪ್ರಶಸ್ತಿ ಪಡೆದು, ಆರು ಸಲ ರಾಜ್ಯ ಪ್ರಶಸ್ತಿ ಪಡೆದ ಏಕೈಕ ಛಾಯಾಗ್ರಾಹಕ ಎನ್ನುವ ಹೆಮ್ಮೆ ಅವರದಾಗಿತ್ತು.
ಬೆಂಗಳೂರಿನ ಜಯಚಾಮರಾಜೇಂದ್ರ ಪಾಲಿಟೆಕ್ನಿಕ್ನಲ್ಲಿ ಛಾಯಾಗ್ರಹಣದಲ್ಲಿ ಶಿಕ್ಷಣ ಪಡೆದ ಗೌರಿಶಂಕರ್, ಶೃಂಗಾರ ಮಾಸ ಚಿತ್ರದ ಮೂಲಕ ಸ್ವತಂತ್ರ ಛಾಯಾಗ್ರಾಹಕರಾಗಿ ಕೆಲಸ ಆರಂಭಿಸಿದ್ದರು. ಹೊಸಬೆಳಕು,ಚಲಿಸುವ ಮೋಡಗಳು,ಬೆಂಕಿಯ ಬಲೆ, ಆಲೆಮನೆ, ಚಿಗುರಿದ ಕನಸು, ಜನುಮದ ಜೋಡಿ, ಇವರ ಪ್ರಮುಖ ಚಿತ್ರಗಳು. ನಿರ್ಮಾಣ ಹಂತದಲ್ಲಿರುವ ಕಾಂಚನಗಂಗಾ ಚಿತ್ರದ ಚಿತ್ರೀಕರಣಕ್ಕೆ ಮನಾಲಿಗೆ ತೆರಳಿದ್ದ ಅವರು ಅಲ್ಲಿಂದ ಮರಳಿದ ಬಳಿಕ ತೀವ್ರ ಅಸ್ವಸ್ಥರಾಗಿದ್ದರು. ತಮಿಳು ಹಾಗೂ ಹಿಂದಿಚಿತ್ರಗಳಿಗೆ ಸಹಾ ಗೌರಿಶಂಕರ್ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದರು.(ಇನ್ಫೋ ವಾರ್ತೆ)
- ಅಣ್ಣಾವ್ರ ಬಿಡುಗಡೆ ವೇಳೆ ವೀರಪ್ಪನ್ ಕೊಟ್ಟು ಕಳುಹಿಸಿದ್ದ ಉಡುಗೊರೆಯೇನು? ಆ ದಿನ ನಡೆದಿದ್ದೇನು?
- Lok Sabha Election 2024: ಕನ್ನಡ ತಾರೆಯರು ನಾಳೆ(ಏಪ್ರಿಲ್ 26) ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- ಪುಟ್ಟಣ್ಣ ಕಣಗಾಲ್-ರಾಜ್ ಕುಮಾರ್ ನಡುವೆ ಮನಸ್ತಾಪ ಮೂಡಿದ್ದೇಕೆ ? ಇಬ್ಬರ ನಡುವೆ ವಾಗ್ಯುದ್ದ ನಡೆದಿದ್ದೇಕೆ ?
- ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
- ShakhaHaari, Blink OTT; ಕಾತರದಿಂದ ಕಾಯುತ್ತಿರುವ 'ಬ್ಲಿಂಕ್', 'ಶಾಖಾಹಾರಿ' ಓಟಿಟಿ ಸ್ಟ್ರೀಮಿಂಗ್ ಎಲ್ಲಿ? ಯಾವಾಗ?
- 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- ಬೆಂಗಳೂರಿನ ಗಾಂಧಿನಗರದಲ್ಲಿ ನಟ ಮಹೇಶ್ ಬಾಬು ಹೊಸ ಬ್ಯುಸಿನೆಸ್ ಶುರು
- ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
- ಸಂಯುಕ್ತಾ ಹೊರನಾಡು ತೆರೆದಿದ್ದ ಆರ್ಟ್ ರೂಮ್ ಈಗ ಹೇಗಿದೆ?
- ದುಡ್ಡು ಕೊಟ್ಟು ನೋಡಿದ್ದಾಯ್ತು.. 'ಯುವ' ಸಿನಿಮಾವನ್ನು ಉಚಿತವಾಗಿ ನೋಡೋದ್ಯಾವಾಗ?
- ಡಾ.ರಾಜ್ ಕುಮಾರ್ ಪಾಲಿಗೆ ಗುರು ಆಗಿದ್ಹೇಗೆ ಕುರಿ ಕಾಯುವ ಹುಡುಗ ? ಅಣ್ಣಾವ್ರಿಗೆ ಗದರಿದ್ದೇಕೆ ಆ ಕುರಿಗಾಹಿ..?
- ಬೇಬಿ ಇಂದಿರಾ ಪತಿ ಅಗಲಿಕೆ ಅಸಲಿಗೆ ಕಾರಣವೇನು? ಸುಳ್ಳು ಸುದ್ದಿಗಳ ಬಗ್ಗೆ ನಟಿ ಹೇಳಿದ್ದೇನು?